
ಸ್ವಾಮಿ ಫ್ರೆಂಡ್ಸ್ ಅಂಬಲಪಾಡಿ ಇದರ ಆಶ್ರಯದಲ್ಲಿ ಉಜ್ವಲ ಸಂಜೀವಿನಿ ಒಕ್ಕೂಟ, ಸ್ಥಳೀಯ ಸಂಘ- ಸಂಸ್ಥೆಗಳು, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರ ಸಹಯೋಗದೊಂದಿಗೆ ಅಂಬಲಪಾಡಿ ಬಂಕೇರಕಟ್ಟ ಪರಿಸರದ ಆಚಾರಿಗುಂಡಿಯಲ್ಲಿ ನಡೆದ ‘ಕೆಸರ್ದ ಗೊಬ್ಬು-2023’ ಗ್ರಾಮೀಣ ಕ್ರೀಡಾಕೂಟದಲ್ಲಿ ಹಡಿಲು ಭೂಮಿ ಕೃಷಿಯ ರೂವಾರಿ ಉಡುಪಿಯ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಪ್ರಭಾರ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಉಡುಪಿ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಸುವರ್ಣ, ಮಾಜಿ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ, ಭಾರತಿ ಭಾಸ್ಕರ್, ಸ್ಥಳೀಯ ಕೃಷಿಕ ಪಠೇಲರ ಮನೆ ಶರತ್ ಶೆಟ್ಟಿ, ಸ್ವಾಮಿ ಫ್ರೆಂಡ್ಸ್ ತಂಡದ ವಿನೋದ್ ಪೂಜಾರಿ, ನಿತೇಶ್, ಸೂರಜ್, ವಿಜಯರಾಜ್, ಉಜ್ವಲ ಸಂಜೀವಿನಿ ಒಕ್ಕೂಟದ ಪಶು ಸಖಿ ಪ್ರಮೀಳಾ ಶಶಿಕಾಂತ್, ಎಲ್ಸಿಆರ್ಸಿ ಇಂದಿರಾ ಪಾಂಡು, ಸದಸ್ಯರಾದ ವಾಣಿ ಪ್ರಭಾಕರ್, ರಂಜಿತಾ ಗುರುರಾಜ್ ಹಾಗೂ ಸ್ವಾಮಿ ಫ್ರೆಂಡ್ಸ್ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
Leave a Reply