Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

“ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಅನುಷ್ಠಾನದ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿ / ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ”

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಉಡುಪಿ ಜಿಲ್ಲೆ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ “ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಅನುಷ್ಠಾನದ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿ / ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ” ವನ್ನು ದಿನಾಂಕ 30/01/2025 ರಂದು ಡಾ. ವಿ. ಎಸ್. ಆಚಾರ್ಯ ಸಭಾಂಗಣ, ಜಿಲ್ಲಾ ಪಂಚಾಯತ್, ರಾಜತಾದ್ರಿ ಮಣಿಪಾಲ ಇಲ್ಲಿ ಆಯೋಜಿಸಲಾಗಿತ್ತು.

ಈ ಕಾರ್ಯಾಗಾರದ ಉದ್ಘಾಟನೆಯನ್ನು ಶ್ರೀ ಯೋಗೀಶ್ ಪಿ. ಆರ್ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಇವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಡಾ. ಕೆ. ವಿದ್ಯಾಕುಮಾರಿ ಭಾ.ಆ. ಸೇ  ಮಾನ್ಯ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ ಇವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಶ್ರೀ ರಾಮದಾಸ್ ಸಹಾಯಕ ಯೋಜನಾಧಿಕಾರಿ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಇವರು ಉಪಸ್ಥಿತರಿದ್ದರು.ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಕೊಣಿಲ್ ರಾಘವೇಂದ್ರ ಭಟ್, ಪ್ರಾದೇಶಿಕ ಸಂಯೋಜಕರು ಯೂನಿಸೆಫ್, ಮಕ್ಕಳ ರಕ್ಷಣಾ ಯೋಜನೆ ಜಿಲ್ಲಾಧಿಕಾರಿ ಕಛೇರಿ ಕೊಪ್ಪಳ  ಇವರು ಆಗಮಿಸಿದ್ದರು.ಆಗಮಿಸಿದ ಅತಿಥಿಗಳನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯಾದ ನಾಗರತ್ನ ನಾಯಕ್ ಇವರು ಸ್ವಾಗತಿಸಿದರು, ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಜ್ಯೋತಿಯವರು ವಂದಿಸಿದರು.

Leave a Reply

Your email address will not be published. Required fields are marked *