Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟದ ವಿವೇಕ ಬಾಲಿಕಿಯರ ಪ್ರೌಢಶಾಲೆಯ ಮೂವರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

ಕೋಟ: ಕುಂದಾಪುರದ ವೆಂಕಟರಮಣ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಜೆಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಕೋಟದ ವಿವೇಕ ಬಾಲಿಕೆಯರ ಪ್ರೌಢಶಾಲೆಯ 10ನೇ ತರಗತಿಯ ಶ್ರಾವ್ಯ, ಸುರಭಿ , ಸಾಯಿಕ್ಷ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 9ನೇ ತರಗತಿಯ ಸೃಷ್ಠಿ 73 ಕೆ.ಜಿ ವಿಭಾಗದಲ್ಲಿ , 8ನೇ ತರಗತಿಯ ಅನನ್ಯ 39ಕೆ.ಜಿ ವಿಭಾಗದಲ್ಲಿ ಹಾಗೂ ಜನನಿ 46ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಯಾದಗಿರಿ ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶನದ ಜೊತೆಗೆ ತರಬೇತಿಯನ್ನು ಶಿಕ್ಷಕ ಗಣೇಶ ಶೆಟ್ಟಿ ಮತ್ತು ಮಮತಾರವರನ್ನು ಶಾಲೆಯ ಆಡಳಿತ ಮಂಡಳಿಯವರು , ಶಾಲಾ ಮುಖ್ಯಸ್ಥರು ಹಾಗೂ  ಅಧ್ಯಾಪಕವೃಂದವರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *