
ಉಡುಪಿ ಜಿಲ್ಲಾ ಮೊಬೈಲ್ ರಿಟೈಲರ್ಸ್ ಅಸೋಯೇಷನ್ ನೂತನ ಅಧ್ಯಕ್ಷರಾಗಿ ನಗರದ ಪ್ರಖ್ಯಾತ ಮೊಬೈಲ್ ಶೋ ರೂಮ್ನ ಮಾಲಕ ವಿವೇಕ್ ಜಿ ಸುವರ್ಣ ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಉಡುಪಿ ಬಲ್ಲಾಳ್ ಮೊಬೈಲ್ಸ್ ಮಾಲಕರಾದ ಸಂದೇಶ್ ಬಲ್ಲಾಳ್, ಕಾರ್ಯದರ್ಶಿ ಖಾದರ್, ಖಜಾಂಚಿಯಾಗಿ ಇಮ್ರಾನ್, ಜೊತೆ ಕಾರ್ಯದರ್ಶಿ ಸುದರ್ಶನ್, ಉಪಾಧ್ಯಕ್ಷರಾಗಿ ರಂಜಿತ್ ಶೆಟ್ಟಿ, ರಾಹುಲ್, ಗಣೇಶ್ ಧನಂಜಯ್ ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ರಾಜೇಶ್ ಮೆಬಿಯನ್, ಸಲೀಂ, ಪ್ರಶಾಂತ್ ಕಿಣಿ ಆಯ್ಕೆಯಾಗಿದ್ದಾರೆ.
ಕುಂದಾಪುರ ವಲಯದ ಅಧ್ಯಕ್ಷರಾಗಿ ಮಹೇಶ್ ಪೂಜಾರಿ, ಕಾರ್ಕಳ ವಲಯ ಅಧ್ಯಕ್ಷರಾಗಿ ಅಜಿತ್ ಕುಮಾರ್,ಮಲ್ಪೆ ವಲಯದ ಅಧ್ಯಕ್ಷರಾಗಿ ಜಾಯೆಲ್ ಅಮಣ್ಣ, ಕಾಪು ವಲಯದ ಅಧ್ಯಕ್ಷರಾಗಿ ಶ್ರೀಕಾಂತ್,ಬ್ರಹ್ಮಾವರ ವಲಯ ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ,ಮಣಿಪಾಲ ವಲಯದ ಅಧ್ಯಕ್ಷರಾಗಿ ಪ್ರಶಾಂತ್ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆಪ್ಟಂಬರ್ 3 ರಂದು ಸಂಜೆ 6 ಗಂಟೆಗೆ ಉಡುಪಿಯ ಟೌನ್ ಹಾಲ್ ನಲ್ಲಿ ನಡೆಯಲಿದೆ.
Leave a Reply