
ಕೋಟ: ಪಂಚವರ್ಣ ಸಂಘಟನೆ ನಡೆಸುವ ಪ್ರತಿ ಸಮಾಜಮುಖಿ ಕಾರ್ಯವು ಗ್ರಾಮದ ಪ್ರತಿಯೊಂದು ಸಂಘಟನೆಗೂ ಮಾದರಿಯಾಗಬೇಕು ಈ ಮೂಲಕ ಗ್ರಾಮ ಸುಭಿಕ್ಷೆಯಾಗಲಿದೆ ಎಂದು ಬ್ರಹ್ಮಾವರ ತಾಲೂಕು ದಂಡಾಧಿಕಾರಿ ಶ್ರೀಕಾಂತ್ ಎಸ್ ಹೆಗ್ಡೆ ಹೇಳಿದರು.
ಮಣೂರು ಪಡುಕರೆ ಆನಂದ್ ಸಿ ಕುಂದರ್ ಮನೆಯಂಗಳದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ನವೆಂಬರ್ 16ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಂಭ್ರಮದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸದ್ಭಾವನಾ 2025ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ ರಾಜ್ಯೋತ್ಸವ ಕಾರ್ಯಕ್ರಮಗಳು ಕನ್ನಡ ನಾಡುನುಡಿಯ ಧ್ವನಿಯಾಗಲಿ ಎಂದು ಹಾರೈಸಿದರು.
ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಪಂಚವರ್ಣ ಗೌರವ ಸಲಹೆಗಾರರಾದ ಆನಂದ್ ಸಿ ಕುಂದರ್ ಮಾತನಾಡಿ ಸ್ವಚ್ಛತಾ ಅಭಿಯಾನ ಪರಿಸರಸ್ನೇಹಿ ಕಾರ್ಯಕ್ರಮಗಳಿಂದ ಮನೆಮಾತಾದ ಪಂಚವರ್ಣ ಸಂಘಟನೆ ಸಮಾಜದ ಮುಖ್ಯವಾಹಿನಿಯಲ್ಲಿರುವ ಸಾಧಕರನ್ನು ಪ್ರಶಸ್ತಿ ನೀಡುತ್ತಾ ಬಂದಿರುವುದು ಶ್ಲಾಘನೀಯ ಕಾರ್ಯ ಅದರಲ್ಲೂ ವಿಜಯಲಕ್ಷ್ಮೀ ಶಿಬರೂರು ಎಂಬ ಸಾಧಕಿಗೆ ಪ್ರಶಸ್ತಿ ನೀಡುತ್ತಿರುವುದು ಸಂಘಟನೆಯ ಗೌರವ ಹೆಚ್ಚಿಸಲಿದೆ ಎಂದರು.

ಸಭೆಯಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ ,ಜನತಾ ಸಮೂಹ ಸಂಸ್ಥೆಗಳ ನಿರ್ದೇಶಕ ಪ್ರಶಾಂತ್ ಎ.ಕುಂದರ್,ಗೀತಾನAದ ಟ್ರಸ್ಟ್ ನ ಗೀತಾ ಎ ಕುಂದರ್, ಪಂಚವರ್ಣ ಯವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್, ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ,bಗೌರವ ಸಲಹೆಗಾರ ಭಾಸ್ಕರ್ ಶೆಟ್ಟಿ ಮಣೂರು, ಕಾರ್ಯಾಧ್ಯಕ್ಷ ಶಶಿಧರ ತಿಂಗಳಾಯ, ಸoಘಟನಾಕಾರ್ಯದರ್ಶಿ ಗಿರೀಶ್ ಆಚಾರ್, ಉಪಾಧ್ಯಕ್ಷರಾದ ಸಂತೋಷ್ ಪೂಜಾರಿ, ದಿನೇಶ್ ಆಚಾರ್, ಮಹಿಳಾಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಉಪಾಧ್ಯಕ್ಷೆ ಪುಷ್ಭಾ ಕೆ ಹಂದಟ್ಟು ಇದ್ದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಸಂಚಾಲಕಿ ಸುಜಾತ ಎಂ ಬಾಯರಿ ಪ್ರಾಸ್ತಾವನೆ ಸಲ್ಲಿಸಿ ನಿರೂಪಿಸಿದರು.ಕಾರ್ಯದರ್ಶಿ ವಸಂತಿ ಹಂದಟ್ಟು ವಂದಿಸಿದರುಸಲಹಾ ಸಮಿತಿಯ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.
ಕೋಟದ ಪಂಚವರ್ಣ ಸಂಘಟನೆಯ ರಾಜ್ಯೋತ್ಸವ ಪ್ರಶಸ್ತಿ ಸದ್ಭಾವನಾ 2025 ಕಾರ್ಯಕ್ರಮದ ಪೋಸ್ಟರ್ನ್ನು ಬ್ರಹ್ಮಾವರ ತಾಲೂಕು ದಂಡಾಧಿಕಾರಿ ಶ್ರೀಕಾಂತ್ ಎಸ್ ಹೆಗ್ಡೆ ಬಿಡುಗಡೆಗೊಳಿಸಿದರು. ಪಂಚವರ್ಣ ಗೌರವ ಸಲಹೆಗಾರರಾದ ಆನಂದ್ ಸಿ ಕುಂದರ್, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ , ಜನತಾ ಸಮೂಹ ಸಂಸ್ಥೆಗಳ ನಿರ್ದೇಶಕ ಪ್ರಶಾಂತ್ ಎ.ಕುಂದರ್, ಗೀತಾನoದ ಟ್ರಸ್ಟ್ ನ ಗೀತಾ ಎ ಕುಂದರ್, ಪಂಚವರ್ಣ ಯವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್ ಇದ್ದರು.
Leave a Reply