Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ – ಪಂಚವರ್ಣದಿoದ 281ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ
ಪುರಾತನ ಹಾಡಿ ವಿಷ್ಣುಮೂರ್ತಿ ದೇಗುಲ ಸ್ವಚ್ಛತಾ ಕಾರ್ಯ

ಕೋಟ: ಪುರಾತನ ದೇಗುಲಗಳನ್ನು ಸ್ವಚ್ಛತೆಯ ಮೂಲಕ ಬೆಳಕಿಗೆ ತರುವ ಪಂಚವರ್ಣ ನಿರಂತ ಸ್ವಚ್ಛತಾ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಹೇಳಿದರು.

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು,ಸಮುದ್ಯತಾ ಗ್ರೂಪ್ಸ್ ಕೋಟ,ಮಣೂರು ಫ್ರೆಂಡ್ಸ್ ,ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ ಇವರುಗಳ ಸಹಯೋಗದೊಂದಿಗೆ 281ನೇ ವಾರದ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕೋಟತಟ್ಟುವಿನ ಪುರಾತನ ಹಾಡಿ ಶ್ರೀ ವಿಷ್ಣುಮೂರ್ತಿ ದೇಗುಲ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ ಪಂಚವರ್ಣದಿoದ ಸ್ವಚ್ಛತಾ ಕಾರ್ಯದ ಮೂಲಕ ಸಮಾಜ ಸ್ವಾಸ್ಥ÷್ಯ ಕಾಪಾಡುವ ಕಾರ್ಯ, ಪ್ರಕೃತಿಯನ್ನು ಪ್ರೀತಿಸಿ ಸಮಾಜಕ್ಕೆ ಬಹುದೊಡ್ಡ ಕೊಡುಗೆಗಳನ್ನು ನೀಡುತ್ತಿದ್ದಾರೆ.ಇಲ್ಲಿನ ಹಾಡಿಯಲ್ಲಿರುವ ಪುರಾತನ ವಿಷ್ಣು ದೇಗುಲವನ್ನು ಸ್ವಚ್ಛಗೊಳಿಸುವ ಮೂಲಕ ವನದೇವಿಯ ಮುಕುಟದಲ್ಲಿರುವ ದೇಗುಲವನ್ನು ಪರಿಚಯಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ದೇಗುಲದ ಅರ್ಚಕರಾದ ಸುರೇಶ್ ಬಾಯರಿ,ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸಂಚಾಲಕಿ ಸುಜಾತ ಬಾಯರಿ, ಉಪಾಧ್ಯಕ್ಷೆ ಪುಷ್ಭ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 281ನೇ ವಾರದ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕೋಟತಟ್ಟುವಿನ ಪುರಾತನ ಹಾಡಿ ಶ್ರೀ ವಿಷ್ಣುಮೂರ್ತಿ ದೇಗುಲ ಸ್ವಚ್ಛತಾ ಕಾರ್ಯಕ್ಕೆ ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಚಾಲನೆ ನೀಡಿದರು. ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್,ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಇದ್ದರು.

Leave a Reply

Your email address will not be published. Required fields are marked *