Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟದ ಪಂಚವರ್ಣದಿಂದ 282ನೇ ಭಾನುವಾರದ ಅಭಿಯಾನ; ಕೋಟ ಶಿಶುಮಂದಿರ ಸ್ವಚ್ಛತಾ ಕಾರ್ಯಕ್ರಮ

ಕೋಟ: ಪಂಚವರ್ಣ ಯುವಕ ಮಂಡಲ  ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್  ಸಹಯೋಗದೊಂದಿಗೆ 282 ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕೋಟದ ಸೇವಾಸಂಗಮ ಶಿಶು ಮಂದಿರ ವಠಾರ ಸ್ವಚ್ಛತಾ ಕಾರ್ಯ ನಡೆಯಿತು.

ಕಾರ್ಯಕ್ರಮಕ್ಕೆ ರಾಷ್ಟೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಗುರುದತ್ತ ಶೆಣೈ ಚಾಲನೆ ನೀಡಿ ಪರಿಸರ ಜಾಗೃತಿಯಲ್ಲಿ ನಿಸ್ವಾರ್ಥ ಸೇವಾ ಕಾರ್ಯ ನೀಡುತ್ತಿರುವ ಪಂಚವರ್ಣ ಚಟುವಟಿಕೆಗಳನ್ನು ಶ್ಲಾಘಿಸಿದರು. ಈ ವೇಳೆ ಸೇವಾಸಂಗಮ ಶಿಶುಮಂದಿರದ ವ್ಯವಸ್ಥಾಪಕಿ ಭಾಗ್ಯವಾದಿರಾಜ್, ಪಂಚವರ್ಣ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸದಸ್ಯರಾದ ಮಹೇಶ್ ಬೆಳಗಾವಿ, ಲೋಹಿತ್ ಆಚಾರ್, ಸ್ಥಳೀಯರಾದ ವಿಶ್ವನಾಥ ಆಚಾರ್ ಉಪಸ್ಥಿತರಿದ್ದರು.

ಪಂಚವರ್ಣ ಯುವಕ ಮಂಡಲ  ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ 282 ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕೋಟದ ಸೇವಾಸಂಗಮ ಶಿಶು ಮಂದಿರ ವಠಾರ ಸ್ವಚ್ಛತಾ ಕಾರ್ಯ ನಡೆಯಿತು. ರಾಷ್ಟೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಗುರುದತ್ತ ಶೆಣೈ, ಸೇವಾಸಂಗಮ ಶಿಶುಮಂದಿರದ ವ್ಯವಸ್ಥಾಪಕಿ ಭಾಗ್ಯವಾದಿರಾಜ್, ಪಂಚವರ್ಣ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಇದ್ದರು.

Leave a Reply

Your email address will not be published. Required fields are marked *